ಕೊಡಗಿನಲ್ಲಿ ಪ್ರವಾಹ: ಗುಡ್ಡ ಕುಸಿದು ಲಾರಿ ಕ್ಲೀನರ್ ಸಾವು
ಕೊಡಗಿನಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು ಜಿಲ್ಲೆಯ ದಕ್ಷಿಣ ಭಾಗದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಕೊಣನೂರು– ಮಾಕುಟ್ಟ ಅಂತರರಾಜ್ಯ ಹೆದ್ದಾರಿಯ ಹನುಮಾನ್ ಪಾರೆ ಎಂಬಲ್ಲಿ ಬೃಹತ್ ಗುಡ್ಡ ಕುಸಿದು ಕರ್ನಾಟಕ- ಕೇರಳ ನಡುವೆ ರಸ್ತೆ ಸಂಚಾರ ಸ್ಥಗಿತಗೊಂಡಿದೆ.